News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

352

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…