News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

354

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.