News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

352

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…