Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

24

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.