News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

35

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….