News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

35

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…