ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…