ಸುದ್ದಿ

ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

45

ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ.

ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಹಕ್ಕಿಯಂತೆ ಗರಿ ಬಿಚ್ಚಿ ಹಾರಿದಂತೆ ಕೈಗಳನ್ನು ಮೇಲೆ ಮಾಡಿ ಖುಷಿಯಿಂದ ಶಿಖರದ ತುದಿಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಜೊತೆಗೆ, ಕೃತಕ ಕಾಲುಗಳಿಗೆ ಸರ್ಕಾರ ವಿಧಿಸಲು ಉದ್ದೇಶಿಸಿರುವ ತೆರಿಗೆಯನ್ನೂ ವಿರೋಧಿಸಿದ್ದಾರೆ. ನಾವು ವಿಶೇಷ ಚೇತನರು ಪ್ಲಾಸ್ಟಿಕ್ ಕಾಲುಗಳು ಇಲ್ಲದಿದ್ದರೂ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳುತ್ತೇವೆ ಎಂಬುದನ್ನು ಸಾಬೀತು ಮಾಡಿ ಸರ್ಕಾರದ ಕಣ್ಣು ತೆರೆಸಲು ನೀರಜ್ ಈ ಎಲ್ಲಾ ನೋವುಗಳನ್ನು ನುಂಗಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನು, ನೀರಜ್ ಸಾಧನೆಗೆ ಕುಟುಂಬಸ್ಥರೂ ಬೆಂಬಲವಾಗಿ ನಿಂತಿದ್ದಾರೆ. ನೀರಜ್ ಈ ಪರ್ವತದ ಮೇಲೆ ಹೋಗಿ ವಿಡಿಯೋ ಕರೆ ಮಾಡಿದ ನಂತರ ಇವರ ಖುಷಿಗೆ ಪಾರವೇ ಇಲ್ಲ. ಏಳನೇ ದಿನ ನೀರಜ್ ಮನೆಯವರಿಗೆ ಕರೆ ಮಾಡಿ ತಮ್ಮ ಸಾಧನೆಯ ವಿಷಯ ತಿಳಿಸಿದ್ದರು. ಅಲ್ಲಿ ತನಕ ಮನೆಯವರೂ ಆತಂಕದಿಂದ ಶುಭ ಸುದ್ದಿಗಾಗಿ ಕಾಯುತ್ತಲೇ ಇದ್ದರು.

ಚಿಕ್ಕಂದಿನಲ್ಲಿ ಚೆನ್ನಾಗಿಯೇ ಇದ್ದ ನೀರಜ್ ಅವರಿಗೆ 1996ರಲ್ಲಿ ಆರೋಗ್ಯದ ಸಮಸ್ಯೆ ಎದುರಾಗಿತ್ತು. ಈ ವೇಳೆ, ಇವರ ಕಾಲನ್ನು ಶಸ್ತ್ರಚಿಕಿತ್ಸೆಮೂಲಕ ತೆಗೆಯಲಾಗಿತ್ತು.ಇದಾದ ಬಳಿಕ ಮನೆಯವರು ನೀರಜ್ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರು.ಆದರೆ, ಈ ಚಿಂತೆಯನ್ನು ಈಗ ನೀರಜ್ ದೂರ ಮಾಡಿದ್ದಾರೆ ಮತ್ತು ಅದ್ಭುತವೊಂದನ್ನು ಸಾಧಿಸಿ ತೋರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….