ಸುದ್ದಿ

ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

37

ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ.

ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಹಕ್ಕಿಯಂತೆ ಗರಿ ಬಿಚ್ಚಿ ಹಾರಿದಂತೆ ಕೈಗಳನ್ನು ಮೇಲೆ ಮಾಡಿ ಖುಷಿಯಿಂದ ಶಿಖರದ ತುದಿಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಜೊತೆಗೆ, ಕೃತಕ ಕಾಲುಗಳಿಗೆ ಸರ್ಕಾರ ವಿಧಿಸಲು ಉದ್ದೇಶಿಸಿರುವ ತೆರಿಗೆಯನ್ನೂ ವಿರೋಧಿಸಿದ್ದಾರೆ. ನಾವು ವಿಶೇಷ ಚೇತನರು ಪ್ಲಾಸ್ಟಿಕ್ ಕಾಲುಗಳು ಇಲ್ಲದಿದ್ದರೂ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳುತ್ತೇವೆ ಎಂಬುದನ್ನು ಸಾಬೀತು ಮಾಡಿ ಸರ್ಕಾರದ ಕಣ್ಣು ತೆರೆಸಲು ನೀರಜ್ ಈ ಎಲ್ಲಾ ನೋವುಗಳನ್ನು ನುಂಗಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನು, ನೀರಜ್ ಸಾಧನೆಗೆ ಕುಟುಂಬಸ್ಥರೂ ಬೆಂಬಲವಾಗಿ ನಿಂತಿದ್ದಾರೆ. ನೀರಜ್ ಈ ಪರ್ವತದ ಮೇಲೆ ಹೋಗಿ ವಿಡಿಯೋ ಕರೆ ಮಾಡಿದ ನಂತರ ಇವರ ಖುಷಿಗೆ ಪಾರವೇ ಇಲ್ಲ. ಏಳನೇ ದಿನ ನೀರಜ್ ಮನೆಯವರಿಗೆ ಕರೆ ಮಾಡಿ ತಮ್ಮ ಸಾಧನೆಯ ವಿಷಯ ತಿಳಿಸಿದ್ದರು. ಅಲ್ಲಿ ತನಕ ಮನೆಯವರೂ ಆತಂಕದಿಂದ ಶುಭ ಸುದ್ದಿಗಾಗಿ ಕಾಯುತ್ತಲೇ ಇದ್ದರು.

ಚಿಕ್ಕಂದಿನಲ್ಲಿ ಚೆನ್ನಾಗಿಯೇ ಇದ್ದ ನೀರಜ್ ಅವರಿಗೆ 1996ರಲ್ಲಿ ಆರೋಗ್ಯದ ಸಮಸ್ಯೆ ಎದುರಾಗಿತ್ತು. ಈ ವೇಳೆ, ಇವರ ಕಾಲನ್ನು ಶಸ್ತ್ರಚಿಕಿತ್ಸೆಮೂಲಕ ತೆಗೆಯಲಾಗಿತ್ತು.ಇದಾದ ಬಳಿಕ ಮನೆಯವರು ನೀರಜ್ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರು.ಆದರೆ, ಈ ಚಿಂತೆಯನ್ನು ಈಗ ನೀರಜ್ ದೂರ ಮಾಡಿದ್ದಾರೆ ಮತ್ತು ಅದ್ಭುತವೊಂದನ್ನು ಸಾಧಿಸಿ ತೋರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…