ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…