ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….