ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…