ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

61

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…