ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

55

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …