News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

64

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…