News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

64

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…