ಆರೋಗ್ಯ

ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

789

ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..

ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು,  ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.

ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.

ಕ್ಯಾರೆಟ್

ಕ್ಯಾರೆಟ್‌ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.

ದಾಳಿಂಬೆ ಹಣ್ಣು

ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಬ್ರೋಕೋಲಿ

ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

 

 

 ಬೆರ್ರಿ ಹಣ್ಣುಗಳು

ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…