ಆರೋಗ್ಯ

ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

222

ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಆರೋಗ್ಯ ಸಮಸ್ಯೆಗಳು..

ಹೃದಯದ ಮೇಲೆ ಪರಿಣಾಮ :-

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಗ್ಯಾಸ್ಟ್ರಿಕ್ ತೊಂದರೆಗಳು:-

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಮಧುಮೇಹದ ಹೆಚ್ಚಿನ ಅಪಾಯ:-

ಬ್ರೇಕ್‌ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್‌ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ತಲೆಗೂದಲು ನಷ್ಟವಾಗಬಹುದು:-

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್‌ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್‌ಭರಿತ ಬ್ರೇಕ್‌ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಬೊಜ್ಜು ಹೆಚ್ಚುತ್ತದೆ:-

ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ:-

ಬ್ರೇಕ್‌ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.