ಉಪಯುಕ್ತ ಮಾಹಿತಿ

ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

2834

ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.  ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.

ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ  ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.

ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.

ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.

ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…