ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…