ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?
ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.
ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.
ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…