ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…