ಉಪಯುಕ್ತ ಮಾಹಿತಿ

ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

999

ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ  ಮೊಬೈಲ್  ಇದ್ದರೆ  ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.ಊಟಕ್ಕೆ, ಶಾಪಿಂಗ್‌ಗೆ, ಪಾರ್ಟಿಗೆ, ಅಥವಾ ಕಾರಣವೇ ಇಲ್ಲದೇ ಸುಮ್ಮನೇ ಸೆಲ್ಫಿ ಜೊತೆಗಿರಬೇಕು.

ಸೆಲ್ಫಿ ಭಯಾನಕತೆ…

ಈಗ ಸೆಲ್ಫಿ ಫೋಟೋಗಳಿಗಾಗಿಯೇ ಹೊಸ ಹೊಸ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ಫೋನ್’ಗಳು ಬರುತ್ತಿವೆ.ಈ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು, ಎಷ್ಟು ರೋಮಾಂಚನವಾಗಿರುತ್ತೋ ಅಷ್ಟೇ ಭಯಾನಕತೆಯೂ ಇದೆ.ಈ ಸೆಲ್ಫಿ ಹುಚ್ಚಿನಿಂದಾಗಿ ವಿಶ್ವದಾದ್ಯಂತ ಸಾವಿರಾರು ಜನರು ಸಾವನಪ್ಪಿದ್ದಾರೆ.ಅಂಕಿ ಅಂಶಗಳ ಪ್ರಕಾರ ಶೇಕಡಾ  60ರಷ್ಟು ಪಾಲು ಭಾರತದಲ್ಲಿದೆ.

ಸೆಲ್ಫಿ ಮಾನಸಿಕ ರೋಗ…

ಈ  ಮಧ್ಯೆ  ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ರೋಗ  ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್  ಯುನಿವರ್ಸಿಟಿ  ಮಧುರೈನ  ತ್ಯಾಗರಾಜ್ ಮ್ಯಾನೇಜ್ಮೆಂಟ್  ಶಾಲೆಯಲ್ಲಿ  ಈ  ಅಧ್ಯಯನ  ಮಾಡಿದ್ದಾರೆ.ಅವಶ್ಯಕತೆಗಿಂತ  ಹೆಚ್ಚು ಸೆಲ್ಫಿ ತೆಗೆಯುವುದು  ಹಾಗೂ  ಅದನ್ನು  ಸಾಮಾಜಿಕ  ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್  ಅನೇಕ  ವರ್ಷಗಳಿಂದ  ಕೇಳಿ  ಬರುತ್ತಿರುವ  ಶಬ್ಧ. ಆದರೆ  ಇವಾಗ   ವೈದ್ಯರು   ಇದಕ್ಕೆ  ಮಾನಸಿಕ  ರೋಗದ  ರೂಪ  ಕೊಟ್ಟಿದ್ದಾರೆ.

 ಸೆಲ್ಫಿ ರೋಗದ 3 ಹಂತಗಳು…

ಸಂಶೋಧನಕಾರರು  ಇದನ್ನು  ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್  ಎಂದು ಕರೆದಿದ್ದಾರೆ. ಇದರಲ್ಲಿ  ಮೂರು  ಹಂತವಿರುತ್ತದೆ. ಪ್ರಾರಂಭದಲ್ಲಿ  ಈ  ರೋಗಿಗಳು  ದಿನಕ್ಕೆ  ಮೂರು ಸಲ  ಮಾತ್ರ  ಫೋಟೋ ತೆಗೆದುಕೊಳ್ಳುತ್ತಾರೆ.ಆದರೆ  ಸಾರ್ವಜನಿಕ  ಜಾಲತಾಣಕ್ಕೆ  ಹಾಕುವುದಿಲ್ಲ. ಎರಡನೇ  ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ  ಸಾರ್ವಜನಿಕ ಜಾಲತಾಣಕ್ಕೆ ಫೋಟೋ  ಹಾಕುವ  ಚಟ   ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹೇಳುತ್ತದೆ . ಈ  ಕ್ರಿಯೆ  ತುಂಬಾ ಜಾಸ್ತಿ ಆದಲ್ಲಿ ಅದನ್ನು ಕೊನೆಯ ಹಂತವೆಂದು ಹೇಳಬಹುದು.

 

ಸೆಲ್ಫಿ  ಹುಚ್ಚಿಗೆ  ಸರಿಯಾದ  ಕಾರಣ…

ಸೆಲ್ಫಿ   ಹುಚ್ಚಿಗೆ   ಬಲಿಯಾಗುತ್ತಿರುವ   ಪ್ರಕರಣಗಳನ್ನು  ಹಲವಾರು  ದೇಶಗಳು  ಗಹನವಾಗಿ ತೆಗೆದುಕೊಂಡಿವೆ. ಇದರ ವಿಚಾರವಾಗಿ  ಅನೇಕ  ಸಂಶೋಧನೆಗಳು  ನಡೆಯುತ್ತಿವೆ. ಆದರೆ ಅಷ್ಟೊಂದು  ಸೆಲ್ಫಿ  ಹುಚ್ಚಿಗೆ  ಸರಿಯಾದ  ಕಾರಣವನ್ನು   ಕಂಡುಇಡಿಯಲು ಆಗುತ್ತಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ  ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ. ದೃಢ ನಿರ್ಧಾರ ಮಾಡಿದಲ್ಲಿ ಈ ರೋಗದಿಂದ ಸುಲಭವಾಗಿ ಹೊರಗೆ ಬರಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…