ಆರೋಗ್ಯ

ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

888

ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ.

ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲ ಎಂದು ಕರೆಯಲ್ಪಡುವ ರಾಮ ಬಾಣವನ್ನು ಪ್ರಯೋಗಿಸಿ.

ನೆಲ್ಲಿಕಾಯಿ ಪೇಸ್ಟ್ :-

ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, 30 ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ. ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.

 

ನೆಲ್ಲಿಕಾಯಿ-ಲಿಂಬೆಹಣ್ಣಿನ ಪ್ಯಾಕ್:-

ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಕೊಂಡು ಅದನ್ನು ಚೆನ್ನಾಗಿ ಒಣಗಿಸಿ. ನಂತರ ಅದನ್ನು ಚೆನ್ನಾಗಿ ಪುಡಿ ಮಾಡಿಕೊಂಡು, ಕಂಟೇನರ್‌ನಲ್ಲಿ ಹಾಕಿಟ್ಟುಕೊಳ್ಳಿ.

ನಿಮಗೆ ಅಗತ್ಯವಾದಾಗ ಇದನ್ನು ನೀರು ಮತ್ತು ಲಿಂಬೆರಸದಲ್ಲಿ ಬೆರೆಸಿಕೊಂಡು ತೆಳುವಾದ ಪೇಸ್ಟ್ ಮಾಡಿಕೊಂಡು, ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಇದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತೊಳೆಯಿರಿ. ಹೆಚ್ಚಿನ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಲು, ಕೂದಲನ್ನು ತೊಳೆಯುವಾಗ ಸೀಗೆಕಾಯಿಯನ್ನು ಬಳಸಬಹುದು.

ನೆಲ್ಲಿಕಾಯಿ-ತುಳಸಿ ಪ್ಯಾಕ್:-

ನೆಲ್ಲಿಕಾಯಿಯನ್ನು ತುಳಸಿ ಮತ್ತು ನೀರಿನೊಂದಿಗೆ ಬೆರೆಸಿಕೊಂಡು ಮೃದುವಾದ ಪೇಸ್ಟ್ ಮಾಡಿ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ನೆಲ್ಲಿಕಾಯಿ ಇಲ್ಲವಾದಲ್ಲಿ, ನೆಲ್ಲಿ ಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪ್ಯಾಕನ್ನು ನಿಮ್ಮ ಕೂದಲಿನ ಬುಡಕ್ಕೆ ಲೇಪಿಸಿ 30 ನಿಮಿಷಗಳ ಕಾಲ ಬಿಡಿ, ನಂತರ ಇದನ್ನು ತೊಳೆಯಿರಿ.

 

ಈ ಬಗೆಯಲ್ಲಿ ನೆಲ್ಲಿಕಾಯಿ ರಸವನ್ನು ಲೇಪಿಸಿಕೊಳ್ಳುವುದರಿಂದ, ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಈ ವಿಧಾನವನ್ನು ವಾರಕ್ಕೆ ಎರಡು ಬಾರಿ ಮಾಡಿ, ತ್ವರಿತಗತಿಯಲ್ಲಿ ಫಲಿತಾಂಶವನ್ನು ಪಡೆಯಬಹುದು. ಇದು ನಿಮಗೆ ತಲೆಹೊಟ್ಟನ್ನು ಮಾತ್ರ ನಿವಾರಿಸುವುದಿಲ್ಲ, ಜೊತೆಗೆ ನಿಮ್ಮ ಕೂದಲಿಗೆ ಕಂಡೀಶನರನ್ನು ಸಹ ನೀಡಿ, ಸ್ವಾಭಾವಿಕವಾಗಿ ಕೂದಲು ಹೊಳೆಯುವಂತೆ ಮಾಡುತ್ತದೆ.

1.ಬೆಟ್ಟದ ನಲ್ಲಿಕಾಯಿ ಜ್ಯೂಸ್ ತಯಾರಿಸಿ ಸ್ನಾನದ ನೀರಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಬೆವರು ವಾಸನೆಗೆ ಕಡಿವಾಣ.

2.ಎರಡು ಚಮಚ ಅಂಟುವಾಳದ ಪುಡಿಗೆ ಎರಡು ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ ಹಾಕಿ ತಲೆಕೂದಲಿಗೆ ಹಚ್ಚಿ ತೊಳೆದು ನೋಡಿ ಕೂದಲು ಕಾಂತಿಯುತವಾಗುವುದು.

3.ಹೇನಿನ ಕಾಟ ಹೆಚ್ಚಾಗಿದ್ದರೆ ಬೆಟ್ಟದ ನೆಲ್ಲಿಕಾಯಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದಕ್ಕೆ ನಿಂಬೆರಸ ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಒಂದೆರೆಡು ತಾಸು ಬಿಟ್ಟು ತೊಳೆಯಿರಿ.

4.ಕಪ್ಪು ಕೂದಲಿಗಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಒಣಗಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಇಟ್ಟುಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…