ಆರೋಗ್ಯ

ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

886

ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ.

ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲ ಎಂದು ಕರೆಯಲ್ಪಡುವ ರಾಮ ಬಾಣವನ್ನು ಪ್ರಯೋಗಿಸಿ.

ನೆಲ್ಲಿಕಾಯಿ ಪೇಸ್ಟ್ :-

ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, 30 ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ. ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.

 

ನೆಲ್ಲಿಕಾಯಿ-ಲಿಂಬೆಹಣ್ಣಿನ ಪ್ಯಾಕ್:-

ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಕೊಂಡು ಅದನ್ನು ಚೆನ್ನಾಗಿ ಒಣಗಿಸಿ. ನಂತರ ಅದನ್ನು ಚೆನ್ನಾಗಿ ಪುಡಿ ಮಾಡಿಕೊಂಡು, ಕಂಟೇನರ್‌ನಲ್ಲಿ ಹಾಕಿಟ್ಟುಕೊಳ್ಳಿ.

ನಿಮಗೆ ಅಗತ್ಯವಾದಾಗ ಇದನ್ನು ನೀರು ಮತ್ತು ಲಿಂಬೆರಸದಲ್ಲಿ ಬೆರೆಸಿಕೊಂಡು ತೆಳುವಾದ ಪೇಸ್ಟ್ ಮಾಡಿಕೊಂಡು, ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಇದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತೊಳೆಯಿರಿ. ಹೆಚ್ಚಿನ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಲು, ಕೂದಲನ್ನು ತೊಳೆಯುವಾಗ ಸೀಗೆಕಾಯಿಯನ್ನು ಬಳಸಬಹುದು.

ನೆಲ್ಲಿಕಾಯಿ-ತುಳಸಿ ಪ್ಯಾಕ್:-

ನೆಲ್ಲಿಕಾಯಿಯನ್ನು ತುಳಸಿ ಮತ್ತು ನೀರಿನೊಂದಿಗೆ ಬೆರೆಸಿಕೊಂಡು ಮೃದುವಾದ ಪೇಸ್ಟ್ ಮಾಡಿ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ನೆಲ್ಲಿಕಾಯಿ ಇಲ್ಲವಾದಲ್ಲಿ, ನೆಲ್ಲಿ ಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪ್ಯಾಕನ್ನು ನಿಮ್ಮ ಕೂದಲಿನ ಬುಡಕ್ಕೆ ಲೇಪಿಸಿ 30 ನಿಮಿಷಗಳ ಕಾಲ ಬಿಡಿ, ನಂತರ ಇದನ್ನು ತೊಳೆಯಿರಿ.

 

ಈ ಬಗೆಯಲ್ಲಿ ನೆಲ್ಲಿಕಾಯಿ ರಸವನ್ನು ಲೇಪಿಸಿಕೊಳ್ಳುವುದರಿಂದ, ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಈ ವಿಧಾನವನ್ನು ವಾರಕ್ಕೆ ಎರಡು ಬಾರಿ ಮಾಡಿ, ತ್ವರಿತಗತಿಯಲ್ಲಿ ಫಲಿತಾಂಶವನ್ನು ಪಡೆಯಬಹುದು. ಇದು ನಿಮಗೆ ತಲೆಹೊಟ್ಟನ್ನು ಮಾತ್ರ ನಿವಾರಿಸುವುದಿಲ್ಲ, ಜೊತೆಗೆ ನಿಮ್ಮ ಕೂದಲಿಗೆ ಕಂಡೀಶನರನ್ನು ಸಹ ನೀಡಿ, ಸ್ವಾಭಾವಿಕವಾಗಿ ಕೂದಲು ಹೊಳೆಯುವಂತೆ ಮಾಡುತ್ತದೆ.

1.ಬೆಟ್ಟದ ನಲ್ಲಿಕಾಯಿ ಜ್ಯೂಸ್ ತಯಾರಿಸಿ ಸ್ನಾನದ ನೀರಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಬೆವರು ವಾಸನೆಗೆ ಕಡಿವಾಣ.

2.ಎರಡು ಚಮಚ ಅಂಟುವಾಳದ ಪುಡಿಗೆ ಎರಡು ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ ಹಾಕಿ ತಲೆಕೂದಲಿಗೆ ಹಚ್ಚಿ ತೊಳೆದು ನೋಡಿ ಕೂದಲು ಕಾಂತಿಯುತವಾಗುವುದು.

3.ಹೇನಿನ ಕಾಟ ಹೆಚ್ಚಾಗಿದ್ದರೆ ಬೆಟ್ಟದ ನೆಲ್ಲಿಕಾಯಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದಕ್ಕೆ ನಿಂಬೆರಸ ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಒಂದೆರೆಡು ತಾಸು ಬಿಟ್ಟು ತೊಳೆಯಿರಿ.

4.ಕಪ್ಪು ಕೂದಲಿಗಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಒಣಗಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಇಟ್ಟುಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…