ಸಿನಿಮಾ

‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

575

ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ  ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ.  ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ  ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ  ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ  ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ  ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…