ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.

ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.
ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….