News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

815

ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ ಅಂಶಗಳು. 

ಬೆಳ್ಳಿಯಲ್ಲಿ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಗುಣವಿದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಬೆಳ್ಳಿಯ ಪಾತ್ರೆಗಳಿಗೆ ಇತರ ಲೋಹದ ಪಾತ್ರೆಗಳಿಗೆ ಅಂಟಿಕೊಂಡಷ್ಟು ಸುಲಭವಾಗಿ ಬ್ಯಾಕ್ಟೀರಿಯಾಗಳು ಅಂಟಿಕೊಳ್ಳುವುದಿಲ್ಲ. ಬೆಳ್ಳಿಯ ಪಾತ್ರೆಗಳನ್ನು ಸ್ಟೆರಿಲೈಸ್ ಮಾಡುವ ಅಗತ್ಯವಿಲ್ಲ.

ಹಾಗಾಗಿ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಸಿದರೆ ಬ್ಯಾಕ್ಟೀರಿಯಾ ಸೋಂಕಿನ ಭಯವಿಲ್ಲ. ಇನ್ನು, ಬೆಳ್ಳಿ ಪಾತ್ರೆಯಲ್ಲಿಟ್ಟ ಆಹಾರ ಹಾಗೂ ಪಾನೀಯಗಳು ಬೇಗ ಕೆಡುವುದಿಲ್ಲ. ಅವು ತಾಜಾ ಆಗಿರುತ್ತವೆ. ಇಂದು ನಾವು ಬಳಸುವ ಅನೇಕ ವಾಟರ್ ಪ್ಯೂರಿಫೈರ್‌ಗಳಲ್ಲಿ ಬೆಳ್ಳಿಯನ್ನು ಬಳಸಿರುತ್ತಾರೆ. 

ಅದೇ ರೀತಿ, ಮಕ್ಕಳಿಗೆ ಬೆಳ್ಳಿಯ ಬಳೆ, ಕಡಗ, ಉಡದಾರಗಳನ್ನು ಹಾಕುವುದಕ್ಕೂ ಕಾರಣವಿದೆ. ಅವು ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತವೆ. ಈ ಎಲ್ಲ ಕಾರಣಗಳಿಂದ ಬೆಳ್ಳಿಯ ಪಾತ್ರೆ ಹಾಗೂ ಆಭರಣಗಳನ್ನು ಬಳಸುವ ಅಭ್ಯಾಸ ಬೆಳೆದುಬಂದಿದೆ.

ಅದು ಚಾಲ್ತಿಯಲ್ಲಿರಲಿ ಎಂಬ ಕಾರಣಕ್ಕೆ ಬೆಳ್ಳಿ ಪವಿತ್ರ ಲೋಹ ಎಂದು ಕರೆಯಲಾಗಿದೆ. ಬೆಳ್ಳಿ ಪಾತ್ರೆಯಲ್ಲಿ ಉಣ್ಣುವುದು ಹಾಗೂ ಬೆಳ್ಳಿಯನ್ನು ಧರಿಸುವುದು ಮಕ್ಕಳಗಿಷ್ಟೇ ಅಲ್ಲ, ದೊಡ್ಡವರಿಗೂ ಒಳ್ಳೆಯದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ