ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…