ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…