ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5535

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.