News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5553

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…