ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.