ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…