ಸುದ್ದಿ

ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

27

ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸುವ ಡ್ರೋಣ್ ಅನ್ನು ಗುರುತಿಸಿದ್ದಾರೆ. ಈ ಕುರಿತು ಬಿಎಸ್‍ಎಫ್ ಪಂಜಾಬ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಧ್ಯರಾತ್ರಿಯ ಹೊತ್ತಿಗೆ ವೀಕ್ಷಣೆಯಿಂದ ಕಣ್ಮರೆಯಾಗುವ ಮೊದಲು ಡ್ರೋಣ್ ಭಾರತದ ಭೂಪ್ರದೇಶಕ್ಕೆ ಆಗಮಿಸಿದ್ದು, ಗಡಿ ಹೊರ ಠಾಣೆಯ ಒಂದು ಕಿ.ಮೀ. ಹತ್ತಿರಕ್ಕೆ ಬಂದಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಅಲ್ಲಿನ ಬಿಎಸ್‍ಎಫ್ ಸಿಬ್ಬಂದಿ ಪಾಕಿಸ್ತಾನದ ಡ್ರೋಣ್‍ಗಳು ರಾತ್ರಿ 10ರಿಂದ 10.40ರ ನಡುವೆ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ನಾಲ್ಕು ಬಾರಿ ಅನುಮಾನಾಸ್ಪದವಾಗಿ ಹಾರುತ್ತಿರುವುದನ್ನು ನೋಡಿದ್ದರು. ಕೆಲವು ವಾರಗಳ ಹಿಂದೆ ರಾಜ್ಯದ ಟಾರ್ನ್‍ತರಣ್ ಜಿಲ್ಲೆಯಲ್ಲಿ ಮಾನವರ ರಹಿತ ವೈಮಾನಿಕ ವಾಹನಗಳು ಕಾರ್ಯಾಚರಣೆ ನಡೆಸಿದ್ದವು.

ಅಲ್ಲದೆ, ಹೆಚ್ಚಿನ ಸಂಖ್ಯೆಯ ಎಕೆ-47 ರೈಫಲ್  ಗಳು, ಉಪಗ್ರಹ ಫೋನ್‍ಗಳು ಹಾಗೂ ಗ್ರಾನೇಡ್‍ಗಳು ಪತ್ತೆಯಾಗಿದ್ದ ಹಿನ್ನೆಲೆ ಈ ಬೆಳವಣಿಗೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಪಂಜಾಬ್ ಪೊಲೀಸರು ಅಮೃತಸರದ ತರಣ್ ನಲ್ಲಿ ಪಾಕಿಸ್ತಾನದ ಡ್ರೋಣ್‍ಗಳನ್ನು ಪತ್ತೆ ಹಚ್ಚಿದ್ದರು. ಈ ಡ್ರೋಣ್‍ಗಳು ಎಂಟು ಎಕರೆ ಪ್ರದೇಶದಲ್ಲಿ ಎಕೆ-47 ಬಂದೂಕುಗಳು, ಗ್ರೆನೇಡ್‍ಗಳು ಹಾಗೂ ಉಪಗ್ರಹ ಆಧಾರಿತ ಫೋನ್‍ಗಳನ್ನು ಕೆಳಗಡೆ ಉದುರಿಸಿತ್ತು. ಈ ಡ್ರೋಣ್‍ಗಳು 5 ಕೆ.ಜಿ. ತೂಕವನ್ನು ಹೊತ್ತೊಯ್ಯುವ ಸಾಮಥ್ರ್ಯ ಹೊಂದಿದ್ದವು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.