ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.
ಬಿಬಿಎಂಪಿ ಕೂಡಾ ಪಿಆರ್ಟಿಎಸ್ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.
ಯೋಜನೆಯ ವೆಚ್ಚ:-
ಪ್ರತಿ ಕಿ.ಮೀ. ಪಿಆರ್ಟಿಎಸ್ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.
ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್ಸಿಸಿ ಕಂಬಗಳು ಮತ್ತು ಸ್ಲಾಬ್ ನಿರ್ಮಿಸಿ ಅದರ ಮೇಲೆ ಪಾಡ್ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.
ಏನಿದು ಪಿಆರ್ಟಿಎಸ್?
ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.
ಎಲ್ಲಿಂದ ಎಲ್ಲಿಯವರಿಗೆ?
ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್ನಿಂದ ವೈಟ್ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.
ವೈಟ್ಫೀಲ್ಡ್ ಯಾಕೆ?
ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್ಫೀಲ್ಡ್.
ನಿತ್ಯ ಪೀಕ್ ಅವರ್ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಹೀಗಿರುತ್ತೆ ಪಾಡ್ ಕಾರ್:-
ವಂಡರ್ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್ ಕಾರುಗಳಂತೆಯೇ ಇರುವ ಈ ಪಾಡ್ ಟ್ಯಾಕ್ಸಿಗಳು ಮ್ಯಾಗ್ನೆಟಿಕ್ ವ್ಹೀಲ್ ಮೂಲಕ ಕಾರ್ಯಾಚರಣೆ ಮಾಡುತ್ತವೆ.
ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.
ಪ್ರಯಾಣ ದರ ಕಡಿಮೆ?
ಆಟೋ, ಆ್ಯಪ್ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್ಟಿಎಸ್ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….