ತಂತ್ರಜ್ಞಾನ

ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

855

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.

ಬಿಬಿಎಂಪಿ ಕೂಡಾ ಪಿಆರ್‌ಟಿಎಸ್‌ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.

ಯೋಜನೆಯ ವೆಚ್ಚ:-

ಪ್ರತಿ ಕಿ.ಮೀ. ಪಿಆರ್‌ಟಿಎಸ್‌ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.

ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್‌ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್‌ಸಿಸಿ ಕಂಬಗಳು ಮತ್ತು ಸ್ಲಾಬ್‌ ನಿರ್ಮಿಸಿ ಅದರ ಮೇಲೆ ಪಾಡ್‌ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.

ಏನಿದು ಪಿಆರ್‌ಟಿಎಸ್‌?

ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.

ಎಲ್ಲಿಂದ ಎಲ್ಲಿಯವರಿಗೆ?

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್‌ನಿಂದ ವೈಟ್‌ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

ವೈಟ್‌ಫೀಲ್ಡ್‌ ಯಾಕೆ?

ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್‌ಫೀಲ್ಡ್‌.

ನಿತ್ಯ ಪೀಕ್‌ ಅವರ್‌ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೀಗಿರುತ್ತೆ ಪಾಡ್‌ ಕಾರ್:-

ವಂಡರ್‌ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್‌ ಕಾರುಗಳಂತೆಯೇ ಇರುವ ಈ ಪಾಡ್‌ ಟ್ಯಾಕ್ಸಿಗಳು ಮ್ಯಾಗ್ನೆಟಿಕ್‌ ವ್ಹೀಲ್‌ ಮೂಲಕ ಕಾರ್ಯಾಚರಣೆ ಮಾಡುತ್ತವೆ.

ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್‌ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.

ಪ್ರಯಾಣ ದರ ಕಡಿಮೆ?

ಆಟೋ, ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್‌ಟಿಎಸ್‌ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್‌ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.