ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.
ಬಿಬಿಎಂಪಿ ಕೂಡಾ ಪಿಆರ್ಟಿಎಸ್ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.
ಯೋಜನೆಯ ವೆಚ್ಚ:-
ಪ್ರತಿ ಕಿ.ಮೀ. ಪಿಆರ್ಟಿಎಸ್ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.
ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್ಸಿಸಿ ಕಂಬಗಳು ಮತ್ತು ಸ್ಲಾಬ್ ನಿರ್ಮಿಸಿ ಅದರ ಮೇಲೆ ಪಾಡ್ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.
ಏನಿದು ಪಿಆರ್ಟಿಎಸ್?
ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.
ಎಲ್ಲಿಂದ ಎಲ್ಲಿಯವರಿಗೆ?
ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್ನಿಂದ ವೈಟ್ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.
ವೈಟ್ಫೀಲ್ಡ್ ಯಾಕೆ?
ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್ಫೀಲ್ಡ್.
ನಿತ್ಯ ಪೀಕ್ ಅವರ್ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಹೀಗಿರುತ್ತೆ ಪಾಡ್ ಕಾರ್:-
ವಂಡರ್ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್ ಕಾರುಗಳಂತೆಯೇ ಇರುವ ಈ ಪಾಡ್ ಟ್ಯಾಕ್ಸಿಗಳು ಮ್ಯಾಗ್ನೆಟಿಕ್ ವ್ಹೀಲ್ ಮೂಲಕ ಕಾರ್ಯಾಚರಣೆ ಮಾಡುತ್ತವೆ.
ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.
ಪ್ರಯಾಣ ದರ ಕಡಿಮೆ?
ಆಟೋ, ಆ್ಯಪ್ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್ಟಿಎಸ್ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…