News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ತಂತ್ರಜ್ಞಾನ

ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

876

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.

ಬಿಬಿಎಂಪಿ ಕೂಡಾ ಪಿಆರ್‌ಟಿಎಸ್‌ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.

ಯೋಜನೆಯ ವೆಚ್ಚ:-

ಪ್ರತಿ ಕಿ.ಮೀ. ಪಿಆರ್‌ಟಿಎಸ್‌ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.

ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್‌ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್‌ಸಿಸಿ ಕಂಬಗಳು ಮತ್ತು ಸ್ಲಾಬ್‌ ನಿರ್ಮಿಸಿ ಅದರ ಮೇಲೆ ಪಾಡ್‌ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.

ಏನಿದು ಪಿಆರ್‌ಟಿಎಸ್‌?

ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.

ಎಲ್ಲಿಂದ ಎಲ್ಲಿಯವರಿಗೆ?

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್‌ನಿಂದ ವೈಟ್‌ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

ವೈಟ್‌ಫೀಲ್ಡ್‌ ಯಾಕೆ?

ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್‌ಫೀಲ್ಡ್‌.

ನಿತ್ಯ ಪೀಕ್‌ ಅವರ್‌ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೀಗಿರುತ್ತೆ ಪಾಡ್‌ ಕಾರ್:-

ವಂಡರ್‌ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್‌ ಕಾರುಗಳಂತೆಯೇ ಇರುವ ಈ ಪಾಡ್‌ ಟ್ಯಾಕ್ಸಿಗಳು ಮ್ಯಾಗ್ನೆಟಿಕ್‌ ವ್ಹೀಲ್‌ ಮೂಲಕ ಕಾರ್ಯಾಚರಣೆ ಮಾಡುತ್ತವೆ.

ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್‌ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.

ಪ್ರಯಾಣ ದರ ಕಡಿಮೆ?

ಆಟೋ, ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್‌ಟಿಎಸ್‌ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್‌ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….