News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ತಂತ್ರಜ್ಞಾನ

ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

876

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.

ಬಿಬಿಎಂಪಿ ಕೂಡಾ ಪಿಆರ್‌ಟಿಎಸ್‌ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.

ಯೋಜನೆಯ ವೆಚ್ಚ:-

ಪ್ರತಿ ಕಿ.ಮೀ. ಪಿಆರ್‌ಟಿಎಸ್‌ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.

ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್‌ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್‌ಸಿಸಿ ಕಂಬಗಳು ಮತ್ತು ಸ್ಲಾಬ್‌ ನಿರ್ಮಿಸಿ ಅದರ ಮೇಲೆ ಪಾಡ್‌ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.

ಏನಿದು ಪಿಆರ್‌ಟಿಎಸ್‌?

ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.

ಎಲ್ಲಿಂದ ಎಲ್ಲಿಯವರಿಗೆ?

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್‌ನಿಂದ ವೈಟ್‌ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

ವೈಟ್‌ಫೀಲ್ಡ್‌ ಯಾಕೆ?

ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್‌ಫೀಲ್ಡ್‌.

ನಿತ್ಯ ಪೀಕ್‌ ಅವರ್‌ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೀಗಿರುತ್ತೆ ಪಾಡ್‌ ಕಾರ್:-

ವಂಡರ್‌ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್‌ ಕಾರುಗಳಂತೆಯೇ ಇರುವ ಈ ಪಾಡ್‌ ಟ್ಯಾಕ್ಸಿಗಳು ಮ್ಯಾಗ್ನೆಟಿಕ್‌ ವ್ಹೀಲ್‌ ಮೂಲಕ ಕಾರ್ಯಾಚರಣೆ ಮಾಡುತ್ತವೆ.

ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್‌ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.

ಪ್ರಯಾಣ ದರ ಕಡಿಮೆ?

ಆಟೋ, ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್‌ಟಿಎಸ್‌ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್‌ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…