ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…