Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

ಪಾರಿಜಾತದ ಆರೋಗ್ಯಕರ ಗುಣಗಳು !!!

414

ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.

ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.

ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.

ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು

ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು

ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.

ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ

– ಜ್ವರ ಚಿಕಿತ್ಸಕ

ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.

– ನೋವು ನಿವಾರಕ

ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.

– ಕ್ಯಾನ್ಸರ್ ತಡೆ

ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.

– ಕೆಮ್ಮಿಗೆ ಮುಕ್ತಿ

ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.

 ಮಲಬದ್ಧತೆ ನಿವಾರಣೆ

ಪಾರಿಜಾತದ ಎಲೆಗಳಲ್ಲಿರುವ ಮಿನರಲ್‌ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.

 ಮೂಳೆ ಸವೆತ ತಪ್ಪಿಸುತ್ತದೆ

ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…