ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…