ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…