ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.