ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.