News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

45

ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ

ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಿರಬೇಕು, ಏಕೆಂದರೆ ಸರ್ಕಾರವು ಹಣವನ್ನು ಡಿಬಿಟಿ ಮೂಲಕ ರೈತರಿಗೆ ವರ್ಗಾಯಿಸುತ್ತದೆ. ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಬೇಕು.



ಯಾರಿಗೆ ಈ ಸೌಲಭ್ಯ ದೊರೆಯುವುದಿಲ್ಲ? ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು 10 ಸಾವಿರಕ್ಕೂ ಹೆಚ್ಚು ಪಿಂಚಣಿ ಪಡೆಯುವ ರೈತರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದ ರೈತರು ಸಹ ಅದರ ಸವಲತ್ತುಗಳಿಂದ ವಂಚಿತರಾಗುತ್ತಾರೆ. ವೈದ್ಯರು, ಎಂಜಿನಿಯರ್, ಸಿಎ, ಶಾಸಕರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಆನ್‌ಲೈನ್‌ನಲ್ಲಿ ನೋಂದಾಯಿಸಲು ನೀವು ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಧಿಕೃತ ವೆಬ್‌ಸೈಟ್ https://www.pmkisan.gov.in ಗೆ ಭೇಟಿ ನೀಡಬೇಕು. ಇಲ್ಲಿ ನೀವು ಫಾರ್ಮರ್ಸ್ ಕಾರ್ನರ್ ಕ್ಲಿಕ್ ಮಾಡಬೇಕು. ಅದರ ನಂತರ ನೀವು ಹೊಸ ರೈತರ ನೋಂದಣಿಯನ್ನು ಕ್ಲಿಕ್ ಮಾಡಬೇಕು. ಇದರ ನಂತರ ಹೊಸ ಪುಟ ತೆರೆಯುತ್ತದೆ. ಇಲ್ಲಿ ನೀವು ನೋಂದಣಿ ಫಾರ್ಮ್ ಅನ್ನು ಪಡೆಯುತ್ತೀರಿ, ಇದರಲ್ಲಿ ನೀವು ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಬೇಕು. ಇದನ್ನು ಸಲ್ಲಿಸಿದ ನಂತರ ನಿಮ್ಮ ನೋಂದಣಿ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಈ ಯೋಜನೆಯಲ್ಲಿ ನೋಂದಣಿಗಾಗಿ, ನೀವು ಆಧಾರ್ ಕಾರ್ಡ್ (Aadhaar Card) ಮತ್ತು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಅವಶ್ಯಕ. ನೋಂದಣಿಗೆ ಬ್ಯಾಂಕ್ ಖಾತೆ ಮತ್ತು ಐಎಫ್‌ಎಸ್‌ಸಿ ಕೋಡ್ ಅಗತ್ಯವಿದೆ. ಇದಲ್ಲದೆ ನೀವು ಮೊಬೈಲ್ ಸಂಖ್ಯೆಯನ್ನು ಹೊಂದಿದ್ದರೆ, ನಿಮಗೆ ಅನುಕೂಲವಿದೆ ಏಕೆಂದರೆ ನೀವು ಮೊಬೈಲ್ ಸಂಖ್ಯೆಯಲ್ಲಿನ ಸಂದೇಶದ ಮೂಲಕ ನೋಂದಣಿಯ ಸ್ಥಿತಿಯನ್ನು ತಿಳಿಯಲು ಸಾಧ್ಯವಾಗುತ್ತದೆ.


01.08.2020 (ನವೀಕರಣ) ಪಟ್ಟಿ ಈ ಕೆಳಗಿನ ಲಿಂಕ್‌ನಲ್ಲಿದೆ.  ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಮತ್ತು ನಿಮ್ಮ ಹಳ್ಳಿಯ ಹೆಸರನ್ನು ಆರಿಸಿದರೆ, ಇಡೀ ಹಳ್ಳಿಯ ರೈತರ ಪಟ್ಟಿ ಬರುತ್ತದೆ.  ಈ ಮಾಹಿತಿಯನ್ನು ಅಗತ್ಯವಿರುವವರಿಗೆ ತಲುಪಿಸಬೇಕೆಂದು ವಿನಂತಿ! https://pmkisan.gov.in/Rpt_BeneficiaryStatus_pub.aspx

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ