Sports

ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

22

ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ. 

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್‌ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್‌ನಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್‌ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು. 

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು. 

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್‌ ಯು ಫಿ ಅವರನ್ನು21-7 ಮತ್ತು 21-14 ಗೇಮ್‌ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸತತ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.

ಸಿಂಧೂ ಪ್ರಮುಖ ಸಾಧನೆಗಳು: 
ಒಲಿಂಪಿಕ್: 
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ವಿಶ್ವ ಚಾಂಪಿಯನ್‌ಶಿಪ್: 
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್) 
2018 ನಾನ್‌ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಕೊಪೆನ್‌ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
2013 ಗುವಾಂಗ್‌ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯನ್ ಗೇಮ್ಸ್: 
2018 ಜಕಾರ್ತ-ಪ್ಯಾಲೆಮ್‌ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಕಾಮನ್‌ವೆಲ್ತ್ ಗೇಮ್ಸ್: 
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ) 
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯಾ ಚಾಂಪಿಯನ್‌ಶಿಪ್: 
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…