ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.
ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.
ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.
ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…