ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.
ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.
ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.
ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.